Friday , September 20 2024
Breaking News
Home / Breaking News / ತಾವರಗೇರಾ ಪೊಲೀಸರಿಂದ ರಸ್ತೆ ಸುರಕ್ಷತಾ ಜಾಥಾ

ತಾವರಗೇರಾ ಪೊಲೀಸರಿಂದ ರಸ್ತೆ ಸುರಕ್ಷತಾ ಜಾಥಾ

 

ಎನ್ ಶಾಮೀದ್ ತಾವರಗೇರಾ

ತಾವರಗೇರಾ : ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕೆಂದು ಹಾಗೂ ಇದೇ ವೇಳೆ ಅಗತ್ಯ ಸಂದರ್ಭಗಳಲ್ಲಿ ಹೊಸದಾಗಿ ಬಂದಿರುವ ತುರ್ತು ವಾಹನ 112 ಕ್ಕೆ ಕರೆ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಸ್ಥಳೀಯ ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.
ಅವರು ಬುಧವಾರ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ 2021 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ದ ಅಂಗವಾಗಿ ನಡೆದ ಬೈಕ್ ಮೂಲಕ ಜಾಗೃತಿ ಜಾಥಾ ನಡೆಸಿದ ನಂತರ ಮಾತನಾಡಿದರು.

 

ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಸುರಕ್ಷತೆಯ ಜೊತೆಗೆ ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು, ಇಲಾಖೆಯು ಹೊಸದಾಗಿ ಅಪಘಾತ ಹಾಗೂ ಬೆಂಕಿ ಅವಗಡದಂತಹ ಸಂಧರ್ಭಗಳಲ್ಲಿ ಸಾರ್ವಜನಿಕ ರಿಗೆ ಅನುಕೂಲವಾಗುವ ಉದ್ದೇಶದಿಂದ ಪೊಲೀಸ್ ಇಲಾಖೆ ತುರ್ತು ಕರೆ ಸಂಖ್ಯೆ112 ಕ್ಕೆ ಕರೆ ಮಾಡಬೇಕೆಂದು ಹೇಳಿದರು.

ಈ ಸಂಧರ್ಬದಲ್ಲಿ ಎಎಸ್ಐ ಗಳಾದ ಮಲ್ಲಪ್ಪ ವಜ್ರದ, ಅತೀಕ ಅಹಮ್ಮದ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!