Thursday , September 19 2024
Breaking News
Home / Breaking News / ತಾವರಗೇರಾ ಪಿಎಸ್ಐ ಗೀತಾಂಜಲಿ ಶಿಂಧೆಗೆ ಮುಖ್ಯಮಂತ್ರಿ ಪದಕ

ತಾವರಗೇರಾ ಪಿಎಸ್ಐ ಗೀತಾಂಜಲಿ ಶಿಂಧೆಗೆ ಮುಖ್ಯಮಂತ್ರಿ ಪದಕ

ವರದಿ ಎನ್  ಶಾಮೀದ್ ತಾವರಗೇರಾ

ತಾವರಗೇರಾ : 2020 ನೇ ಸಾಲಿನ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ನೀಡಲಾಗುವ ಮುಖ್ಯ ಮಂತ್ರಿ ಪದಕಕ್ಕೆ ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಭಾಜನರಾಗಿದ್ದಾರೆ.

ಮೇಲಾಧಿಕಾರಿಗಳ ಮಾರ್ಗದರ್ಶನ ಹಾಗೂ ಠಾಣಾ ಸಿಬ್ಬಂದಿ ಸಹಕಾರದೊಂದಿಗೆ 2020 ನೇ ಸಾಲಿನ ಠಾಣೆಯಲ್ಲಿಯ ಪ್ರಕರಣ ಗಳನ್ನು ಅತೀ ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಿದ್ದಕ್ಕಾಗಿ ಮತ್ತು ಪೊಲೀಸ್ ಐ ಟಿ ಯ ಉತ್ತಮ ಪ್ರಗತಿ ಹಾಗೂ ಕರೋನ ಸಂಧರ್ಬದಲ್ಲಿ ಉತ್ತಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯಿಂದ ಆಯ್ಕೆಯಾಗಿರುವುದು ಮೇಲಾಧಿಕಾರಿಗಳ ಹಾಗೂ ಠಾಣಾ ಸಿಬ್ಬಂದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಮನ್ಸ್ ಹಾಗೂ ವಾರಂಟ್ ಜಾರಿಗೊಳಿಸುವಲ್ಲಿ ಉತ್ತಮ ಸಾಧನೆ ಮಾಡಿದ್ದು ಕೂಡ ಇಲಾಖೆಯ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಅತ್ಯಂತ ಕಡಿಮೆ ಶೇಕಡಾವಾರು ಪ್ರಕರಣಗಳ ತನಿಖೆಯಲ್ಲಿ ಬಾಕಿ ಇರಿಸಿಕೊಂಡು ಉತ್ತಮ ಕರ್ತವ್ಯ ನಿರ್ವಹಣೆ ಪರಿಗಣಿಸಿ ಮುಂದಿನ ದಿನಗಳಲ್ಲಿ ಪದಕ ಪ್ರಧಾನ ಸಮಾರಂಭದ ದಿನಾಂಕ ನಿಗದಿಪಡಿಸಲಾಗುವುದೆಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!