Thursday , September 19 2024
Breaking News
Home / Breaking News / ತಾವರಗೇರಾ: ಪಟ್ಟಣಕ್ಕೆ ಸಿದ್ದರಾಮಯ್ಯ, ಡಿಕೆಶಿ

ತಾವರಗೇರಾ: ಪಟ್ಟಣಕ್ಕೆ ಸಿದ್ದರಾಮಯ್ಯ, ಡಿಕೆಶಿ

ವರದಿ: ಎನ್ ಶಾಮೀದ್ ತಾವರಗೇರಾ

ತಾವರಗೇರಾ : ಪಕ್ಕದ ಮಸ್ಕಿ ಉಪ ಚುನಾವಣೆಯ ಕಾವು ದಿನೆ ದಿನೇ ಹೆಚ್ಚಾಗುತ್ತಲೇ ಇದೆ. ಈ ಚುನಾವಣೆಗೆ ಪಟ್ಟಣವು ಶಕ್ತಿ ಕೇಂದ್ರವಾಗಿ ಹೊರಹೊಮ್ಮಿರುವುದು ವಿಶೇಷ.
ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ತಾವರಗೇರಾ ಪಟ್ಟಣದಲ್ಲಿನ ವಸತಿ ಕೇಂದ್ರಗಳು ಸೇರಿದಂತೆ ವಿವಿಧೆಡೆ ಈಗಾಗಲೇ ಬೀಡುಬಿಟ್ಟಿದ್ದಾರೆ. ಪಟ್ಟಣಕ್ಕೆ ಕೆಲವೇ ಕಿ.ಮೀ ದೂರದಲ್ಲಿರುವ ಮಸ್ಕಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಉಪ ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ಕೆಲ ನಾಯಕರು ಪಟ್ಟಣವನ್ನೇ ಕೇಂದ್ರವಾಗಿಸಿಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಬ್ಬರು ನಾಯಕರು  ಪಟ್ಟಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಮೂಲಕ  ದಿನಾಂಕ 05-04-2021 ರಂದು  ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ನ ಇಬ್ಬರು ಹಿರಿಯ ನಾಯಕರ ಜೊತೆಗೆ ಕಾಂಗ್ರೆಸ್ ನಾಯಕರ ದಂಡೆ ಹರಿದು ಬರಲಿದೆ.

ಈಗಾಗಲೇ ಎಲ್ಲಾ ಹೋಟೆಲ್ ಸೇರಿದಂತೆ ವಸತಿ ಗೃಹಗಳು ಹೌಸ್ ಫುಲ್ ಆಗಿವೆ. ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರು ಮಸ್ಕಿ ಉಪ ಚುನಾಚಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ರೋಡ್ ಶೋ ಕೈಗೊಳ್ಳುವ ಬಾರಿ ಸದ್ದು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. ಮಸ್ಕಿ ಉಪ ಚುನಾವಣೆಯ ಫಲಿತಾಂಶಕ್ಕೆ ಪಟ್ಟಣವು ದಿಕ್ಸೂಚಿಯಾಗುವುದರಲ್ಲಿ ಸಂಶಯವಿಲ್ಲ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!