Thursday , September 19 2024
Breaking News
Home / Breaking News / ಜಿಲ್ಲಾ ಉಸ್ತುವಾರಿ ಸಚಿವ‌ ಆನಂದಸಿಂಗ್ ಅವರಿಂದ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಭೇಟಿ:ಪರಿಶೀಲನೆ

ಜಿಲ್ಲಾ ಉಸ್ತುವಾರಿ ಸಚಿವ‌ ಆನಂದಸಿಂಗ್ ಅವರಿಂದ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಭೇಟಿ:ಪರಿಶೀಲನೆ

ವರದಿ : ಪಂಪನಗೌಡ. ಬಿ.ಬಳ್ಳಾರಿ

ಬಳ್ಳಾರಿ, ಮೇ 20: ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಆನಂದಸಿಂಗ್ ಅವರು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ
ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿಯ ಆಧಾರದ ಮೇಲೆ ಆಸ್ಪತ್ರೆ ದಾಖಲಾತಿಯ ಅಗತ್ಯವನ್ನು ನಿರ್ಧರಿಸುವ ಸಲುವಾಗಿರುವ ಟ್ರಯಾಜ್ ಕೇಂದ್ರಗಳನ್ನು ಪರಿಶೀಲಿಸಿ ಅಗತ್ಯ ಸಲಹೆ- ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಇದಕ್ಕೂ ಮುಂಚೆ ಜಿಂದಾಲ್‌ ಎದುರುಗಡೆ ಸ್ಥಾಪಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ‌ ನೀಡಿ, ಸೊಂಕಿತರ ದಾಖಲಾತಿಯ ಸ್ಥಿತಿಗತಿ ಪರಿಶೀಲಿಸಿದರು ಮತ್ತು ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ದೇವಾನಂದ, ವಿಮ್ಸ್ ಅಧೀಕ್ಷಕ ಡಾ.ಮರಿರಾಜ್ ಹೂಗಾರ್, ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ, ಡಿಎಚ್ಒ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಮತ್ತಿತರರು ಇದ್ದರು.

About Nagaraj M

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!