Thursday , September 19 2024
Breaking News
Home / Breaking News / ತಾವರಗೇರಾ: ಕರೊನಾ ವಾರಿಯಸ್೯ಗೆ ಊಟದ ಪ್ಯಾಕೆಟ್ ವಿತರಿಸಿದ ಶೇಷಾದ್ರಿ ಬ್ಯಾಂಕ್..!

ತಾವರಗೇರಾ: ಕರೊನಾ ವಾರಿಯಸ್೯ಗೆ ಊಟದ ಪ್ಯಾಕೆಟ್ ವಿತರಿಸಿದ ಶೇಷಾದ್ರಿ ಬ್ಯಾಂಕ್..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಕರೊನಾ ಹಿನ್ನಲೆಯಲ್ಲಿ ದಿನಾಲು ಜನರ ಆರೋಗ್ಯದ ಹಿತದೃಷ್ಟಿಯಿಂದ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೊಲೀಸ್ ಇಲಾಖೆ, ಗೃಹ ರಕ್ಷಕದಳ, ಪೌರ ಕಾರ್ಮಿಕರಿಗೆ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಪಟ್ಟಣದ ಶೇಷಾದ್ರಿ ಸಹಕಾರ ನಿಯಮಿತ ಬ್ಯಾಂಕ್ ನ ವತಿಯಿಂದ ಊಟದ  ಪ್ಯಾಕೆಟ್ ಮತ್ತು ನೀರಿನ ಬಾಟಲ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಳಿಗ್ಗೆಯಿಂದ ರಾತ್ರಿಯವರೆಗೆ ಕರೊನಾ ವಾರಿಯಸ್೯ ಆಗಿ ಕೆಲಸ ಮಾಡುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಆಹಾರ ವಿತರಿಸಿರುವುದಕ್ಕೆ ಪಟ್ಟಣದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳೀಯ ಬ್ಯಾಂಕಿನ ಕುಬೇರಪ್ಪ ಕ್ಯಾಡೇದ, ಶಂಕರ್ ಇಲ್ಲೂರ, ಮಂಜುನಾಥ ಶೆಟ್ಟಿ, ಪ್ರಶಾಂತ ಕ್ಯಾಡೇದ, ರಾಜುಮೀಯಾ ಪಠಾಣ, ಶಿವಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!