Friday , September 20 2024
Breaking News
Home / Breaking News / ತಾವರಗೇರಾ; ಸಾಲ ಭಾದೆ ತಾಳಲಾರದೇ ರೈತ ಆತ್ಮಹತ್ಯೆ..!

ತಾವರಗೇರಾ; ಸಾಲ ಭಾದೆ ತಾಳಲಾರದೇ ರೈತ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಗರ್ಜಿನಾಳ ಗ್ರಾಮದಲ್ಲಿ ನಡೆದಿದೆ.
ಮೃತ ರೈತರನ್ನು ಹುಲುಗಪ್ಪ ಅಯ್ಯಪ್ಪ ಕನ್ನಾಪೇಟ (58) ಎಂದು ಗುರುತಿಸಲಾಗಿದೆ.
ಮೃತ ರೈತನು ತಾವರಗೇರಾದ ಎಸ್ ಬಿಐ ಬ್ಯಾಂಕಿನಿಂದ 2 ಲಕ್ಷರೂಗಳ ಸಾಲ ಪಡೆದಿದ್ದ ಮತ್ತು ಖಾಸಗಿಯಾಗಿ 2 ಲಕ್ಷ ರೂ ಸಾಲ ಪಡೆದುಕೊಂಡಿದ್ದಾನೆ, ಸಾಲದ ಬಗ್ಗೆ ಮನೆಯಲ್ಲಿ ಗೋಳಾಟದಿಂದ ನರಳುತ್ತಿದ್ದನ್ನು ಕಂಡು ಶನಿವಾರದಂದು ಮನಸ್ಸಿಗೆ ಬೇಜಾರು ಮಾಡಿಕೊಂಡು, ಉಳ್ಳಾಗಡ್ಡಿ ಬೆಳೆಗೆ ಸಿಂಪಡಿಸುವ ಕ್ರೀಮಿನಾಶಕ ಸೇವಿಸಿದ್ದಾನೆ ಚಿಕಿತ್ಸೆ ಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಪಿಎಸ್ಐ ವೈಶಾಲಿ ಜಳಕಿ ತಿಳಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!