Thursday , September 19 2024
Breaking News
Home / Breaking News / ತಾವರಗೇರಾ: ಸೌಹಾರ್ದತೆಗೆ ಸಾಕ್ಷಿಯಾದ ಶಿವಾಜಿ ಜಯಂತಿ..!

ತಾವರಗೇರಾ: ಸೌಹಾರ್ದತೆಗೆ ಸಾಕ್ಷಿಯಾದ ಶಿವಾಜಿ ಜಯಂತಿ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದಲ್ಲಿ ಶಿವಾಜಿ ಬಳಗದ ವತಿಯಿಂದ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಯಲ್ಲಿ ಪಾಲ್ಗೊಂಡಿದ್ದವರಿಗೆ ಸ್ಥಳೀಯ ಮುಸ್ಲಿಂ ಬಾಂಧವರಿಂದ ತಂಪು ಪಾನೀಯಗಳ (ಶರಬತ್) ನೀಡುವ ಮೂಲಕ ಸೌಹಾರ್ದತೆ ಮೆರೆದಿರುವುದು ಎಲ್ಲರ ಗಮನ ಸೆಳೆಯಿತು.
ಮೊದಲಿಗೆ ಇಲ್ಲಿಯ ಶ್ರೀ ರಾಮ ಮಂದಿರದಲ್ಲಿ ಶಿವಾಜಿಯ ಭಾವಚಿತ್ರ ಮೆರವಣಿಗೆಗೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್‌ ಹಾಗೂ ಮಾಜಿ ಜಿಪಂ ಸದಸ್ಯ ಕೆ.ಮಹೇಶ ಚಾಲನೆ ನೀಡಿದರು.

ನಂತರ ಪ್ರಮುಖ ವೃತ್ತದಲ್ಲಿ ಮೆರವಣಿಗೆ ನಡೆದು ಸ್ಥಳೀಯ ವೆಂಕಟೇಶ್ವರ ದೇವಸ್ಥಾನದ ಹತ್ತಿರ ಬರುತ್ತಿದ್ದಂತೆ ಮುಸ್ಲಿಂ ಬಾಂಧವರು ಶಿವಾಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಶರಬತ್ ನೀಡಿರುವುದು, ಸಾರ್ವಜನಿಕರ ಪ್ರಶಂಸೆ ಗೆ ಕಾರಣವಾಯಿತು.
ಒಟ್ಟಿನಲ್ಲಿ ಸ್ಥಳೀಯ ವಾಗಿ ಹಿಂದು ಮುಸ್ಲಿಂ ಬಾಂಧವರು ಸೌಹಾರ್ದತೆಗೆ ಸಾಕ್ಷಿಯಾಯಿತು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!