Thursday , September 19 2024
Breaking News
Home / Breaking News / ಮತ್ತೊಮ್ಮೆ ಬಯ್ಯಾಪೂರ ಗೆಲವು ಖಚಿತ,: ಉಮಾಶ್ರೀ..!

ಮತ್ತೊಮ್ಮೆ ಬಯ್ಯಾಪೂರ ಗೆಲವು ಖಚಿತ,: ಉಮಾಶ್ರೀ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಅಭಿವೃದ್ಧಿಯ ಹರಿಕಾರನೆಂದೇ ಗುರುತಿಸಿಕೊಂಡಿರುವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ಸಿಗೆ ಅಧಿಕಾರ ನೀಡಿ ಎಂದು ಮಾಜಿ ಸಚಿವೆ ಹಾಗೂ ಚಿತ್ರ ನಟಿ ಉಮಾಶ್ರೀ ಹೇಳಿದರು.

ಶನಿವಾರದಂದು ಅವರು ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರ ಪರವಾಗಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಕರೊನಾ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡವರ ಹಣವನ್ನು ಲೂಟಿ ಮಾಡಿದೆ.ಲ, ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುತ್ತಿರುವ ಬಿಜೆಪಿಯನ್ನು ನಂಬಬೇಡಿ ಸಮಬಾಳು ಸಮಪಾಲು ಎನ್ನುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಉಪಾಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ನಾಲತವಾಡ, ಮಾಲತಿ ನಾಯಕ್, ಆದಪ್ಪ ನಾಲತವಾಡ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಸಾವಿರಾರು ಸಂಖ್ಯೆಯ ಅಭಿಮಾನಿಗಳೊಂದಿಗೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿತ್ತು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!