Friday , September 20 2024
Breaking News
Home / Breaking News / ಮತ್ತೊಮ್ಮೆ ಬಯ್ಯಾಪುರ್ ಗೆಲ್ಲಿಸಿ,- ಎಸ್ ನಾರಾಯಣ..!

ಮತ್ತೊಮ್ಮೆ ಬಯ್ಯಾಪುರ್ ಗೆಲ್ಲಿಸಿ,- ಎಸ್ ನಾರಾಯಣ..!

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಜನ ತಿರಸ್ಕರಿಸಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ, ಮತ್ತೊಮ್ಮೆ ಕ್ಷೇತ್ರದಲ್ಲಿ ಬಯ್ಯಾಪೂರ ಅವರನ್ನು ಗೆಲ್ಲಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ನವರು ಮತ್ತೆ ಮುಖ್ಯಮಂತ್ರಿ ಯಾಗಲಿದ್ದಾರೆಂದು ನಟ ಹಾಗೂ ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಾದ ಎಸ್ ನಾರಾಯಣ ಹೇಳಿದರು.

ಅವರು ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪೂರ ಪರವಾಗಿ ಪ್ರಚಾರ ಸಮಾವೇಶದಲ್ಲಿ ಭಾನುವಾರ ಸಾಯಾಂಕಾಲ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದಿನ ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಈ ಬಾರಿ ಕಾಂಗ್ರೆಸ್ ಪರವಾಗಿ ಮತ ನೀಡಬೇಕೆಂದು ಹೇಳಿದರು.

ನಂತರ ಶಾಸಕ ಅಮರೇಗೌಡ ಬಯ್ಯಾಪೂರ ಮಾತನಾಡಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅವುಗಳನ್ನು ಗುರುತಿಸಿ ಮತ ನೀಡಿ ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗಲು ಮತದಾರರು ಆಶೀರ್ವದಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಸನಸಾಬ ದೋಟಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ನಾಲತವಾಡ, ಮುಖಂಡರಾದ ಡಾ,ಶಾಮೀದ್ ದೋಟಿಹಾಳ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಸನಗೌಡ ಮಾಲಿ ಪಾಟೀಲ್, ರುದ್ರಗೌಡ ಕುಲಕರ್ಣಿ, ವಿರೇಶ ತಾಳಿಕೋಟಿ, ಹನುಮಗೌಡ ಕಿಲ್ಲಾರಹಟ್ಟಿ, ಆದಪ್ಪ ನಾಲತವಾಡ, ಬಸಪ್ಪ ನಾಲತವಾಡ, ನಾರಾಯಣ ಗೌಡ ಮೆದಿಕೇರಿ, ಅಮರೇಶ ಗಾಂಜಿ, ವಿಕ್ರಮ್ ರಾಯ್ಕರ್, ಫಯಾಜ್ ಬನ್ನು, ಯಂಕನಗೌಡ, ಅಂಬಣ್ಣ ಸರನಾಡಗೌಡರ, ಅಮರೇಶ ಕುಂಬಾರ, ಚನ್ನು ಕುಂಬಾರ, ಶಶಿಕಲಾ ಬಿಳೆಗುಡ್ಡ, ಬೇಬಿ ರೇಖಾ ಉಪ್ಪಳ, ಅಮರಮ್ಮ ಕಂದಗಲ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!