Thursday , September 19 2024
Breaking News
Home / Breaking News / ಕಾರು ಡಿಕ್ಕಿ ಮೂವರ ಸಾವು..!

ಕಾರು ಡಿಕ್ಕಿ ಮೂವರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಲಾರಿಯ (ಕಂಟೈನರ್) ಹಿಂಭಾಗಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 3 ಜನ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ವಣಗೇರಿ ಬಳಿ ನಡೆದಿದೆ.

ವಿಜಯಪುರದ ಸ್ವಿಫ್ಟ್ ಕಾರ್ ಚಾಲಕನು ಅತೀ ವೇಗವಾಗಿ ಕಾರು ಚಲಾಯಿಸುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು ಕಾರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದರೇ , ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಮೃತರನ್ನು ಕಾರು ಚಾಲಕ ಪ್ರವೀಣ್ ಕುಮಾರ ಚೌಹಾಣ (27), ಸುರೇಶ ಹಂಡೇವಜೀರ (43), ಗೌರಮ್ಮ ಹಂಡೇವಜೀರ (60) ಎಂದು ಗುರುತಿಸಲಾಗಿದ್ದು, ಮೃತ ರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ದವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕುಷ್ಟಗಿ ಪಿಎಸ್ ಐ ಮೌನೇಶ ರಾಠೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!