Thursday , September 19 2024
Breaking News
Home / Breaking News / ಶಿಕ್ಷಣ ಪ್ರೇಮಿ ಲಕ್ಷ್ಮಣಪ್ಪ ಶಿರವಾರ ಇನ್ನಿಲ್ಲ..!

ಶಿಕ್ಷಣ ಪ್ರೇಮಿ ಲಕ್ಷ್ಮಣಪ್ಪ ಶಿರವಾರ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಪಟ್ಟಣದ ಹಿರಿಯ ನಾಗರಿಕರು ಹಾಗೂ ಶಿಕ್ಷಣ ಪ್ರೇಮಿಗಳಾಗಿದ್ದ ಮತ್ತು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಮೊದಲ ಧ್ವಜಾರೋಹಣ ದಲ್ಲಿ ಪಾಲ್ಗೊಂಡ ಹಿರಿಮೆಗೆ ಪಾತ್ರರಾಗಿದ್ದ ಲಕ್ಷ್ಮಣಪ್ಪ ತಿಪ್ಪಣ್ಣ ಶಿರವಾರ (87) ಬುಧವಾರದಂದು ನಿಧನರಾಗಿದ್ದಾರೆ.

ಸ್ಥಳೀಯ ಜನತಾ ಶೈಕ್ಷಣಿಕ ಸಂಘವು 1984-85 ರಿಂದ ಪ್ರಾರಂಭವಾಗಿ ಇಂದಿನವರೆಗೂ 39 ವರ್ಷಗಳ ಕಾಲ ಆ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹಿರಿಮೆಯು ಇವರದು. ಜೊತೆಗೆ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಪ್ರತಿಯೊಬ್ಬರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಹಾಗೂ ಸ್ಥಳೀಯ ಕುರುಹಿನ ಶೆಟ್ಟಿ ಸಮಾಜದ ಅಧ್ಯಕ್ಷರಾಗಿದ್ದರು.
ಮೃತರು 3 ಜನ ಗಂಡು ಮಕ್ಕಳು, 5 ಜನ ಹೆಣ್ಣುಮಕ್ಕಳು ಸೇರಿದಂತೆ ಅಪಾರ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಕುಟುಂಬ ಸದಸ್ಯರು ಸೇರಿದಂತೆ ಸ್ಥಳೀಯ ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ವರ್ಗ ಸೇರಿದಂತೆ ಪಟ್ಟಣದ ನಾಗರಿಕರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯು ಗುರುವಾರದಂದು ನಡೆಯಲಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!