ವರದಿ ಎನ್ ಶಾಮೀದ್ ತಾವರಗೇರಾ
ಕುಷ್ಟಗಿ: ತಾಲೂಕಿನ ಕ್ಯಾದಿಗುಪ್ಪಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಗೆ ತೀವ್ರ ವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತ ದುರ್ದೈವಿಯನ್ನು ದೋಟಿಹಾಳ ಗ್ರಾಮದ ನಿವಾಸಿ ವೀರಭದ್ರಪ್ಪ ಶಿವಪುತ್ರಪ್ಪ ಬಳೆಗಾರ (32) ಎಂದು ಗುರುತಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಕೇಸೂರು ಗ್ರಾಮದ ಮುಡಬಸಪ್ಪ ಎಂದು ಗುರುತಿಸಲಾಗಿದೆ.
ಇಬ್ಬರು ಬೈಕ್ ಸವಾರರು ಹೋಗುತ್ತಿದ್ದಾಗ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.