Friday , October 18 2024
Breaking News
Home / Breaking News / ಮಾರಕಾಸ್ತ್ರಗಳಿಂದ ಹಲ್ಲೆ, ಯುವಕನ ಕೊಲೆ..!

ಮಾರಕಾಸ್ತ್ರಗಳಿಂದ ಹಲ್ಲೆ, ಯುವಕನ ಕೊಲೆ..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ತಾಲೂಕಿನ ಜಾಲಿಹಾಳ ಗ್ರಾಮದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.

ಕೊಲೆಯಾದ ಯುವಕನನ್ನು ಭಾಗಪ್ಪ ಹನುಮಪ್ಪ ಕ್ಯಾದಿಗುಂಪಿ (28) ಎಂದು ಗುರುತಿಸಲಾಗಿದೆ. ಜಾಲಿಹಾಳ ಗ್ರಾಮದ ಹೊರಹೊಲಯದ ಮುದೇನೂರ ರಸ್ತೆಯ ಪಕ್ಕದಲ್ಲಿ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು ಘಟನೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಘಟನಾ ಸ್ಥಳಕ್ಕೆ ಡಿವಾಯ್ ಎಸ್ ಪಿ ಸಿದ್ದಲಿಂಗಪ್ಪ ಗೌಡ, ಕುಷ್ಟಗಿ ಸಿಪಿಐ ಯಶವಂತ ಬೀಸನಳ್ಳಿ, ಪಿಎಸ್ಐ ಮುದ್ದುರಂಗ ಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ತಂಡದವರು ಕೊಲೆಗಾರರ ಪತ್ತೆಗೆ ಶೋಧ ಆರಂಭಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!