ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:- ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಆಯಿಷಾ ನಬೀಸಾಬ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ 4 ನೇ ಸ್ಥಾನ ಹಾಗೂ ಕುಷ್ಟಗಿ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿ ಮಾಸವ್ವ ಮಾಲಪ್ಪ 6 ನೇ ಸ್ಥಾನ ಪಡೆಯುವ ಮೂಲಕ ಕುಷ್ಟಗಿ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ನಡೆಸಿದೆ 2022-23 ನೇ ಸಾಲಿನ ಬಿ.ಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಇವರಿಬ್ಬರು ರ್ಯಾಂಕ್ ಗಳಿಸುವ ಮೂಲಕ ಕೀರ್ತಿ ತಂದಿದ್ದಕ್ಕಾಗಿ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರಾದ ವಿಧಾನಸಭಾ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಕುಷ್ಟಗಿ ಕಾಲೇಜಿನ ಪ್ರಾಚಾರ್ಯ ಡಾ ಎಸ್ ವಿ ಡಾಣಿ ಮತ್ತು ತಾವರಗೇರಾ ಕಾಲೇಜಿನ ಪ್ರಾಚಾರ್ಯರಾದ ಅರುಣಾ ಕುಮಾರಿ ಹಾಗೂ ಸಿಬ್ಬಂದಿ ವರ್ಗ ಮತ್ತು ಪಾಲಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.